ಚಿಚಖಂಡಿ ಸೇತುವೆ ಮೇಲೆ ಬಸ್‌- ಬೈಕ್‌ ಮುಖಾಮುಖಿ ಡಿಕ್ಕಿ: ಇಬ್ಬರೂ ಸವಾರರು ಸಾವು

ಮುಧೋಳ: ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಚಿಚಖಂಡಿಯಲ್ಲಿರುವ ಘಟಪ್ರಭಾ ಸೇತುವೆ ಮೇಲೆ ನಡೆದ ಭೀಕರ ಅಪಘಾತದಲ್ಲಿ ಬೈಕ್‌ ಸವಾರರಿಬ್ಬರು ಮೃತಪಟ್ಟಿದ್ದಾರೆ.

ಕೆಎಸ್ ಆರ್ ಟಿ ಸಿ ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಈ ದುರಂತ ಸಂಭವಿಸಿದ್ದು, ಬೈಕ್‌ನಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಅಪಘಾತದ ರಭಸಕ್ಕೆ ಬೈಕ್ ನಜ್ಜುಗುಜ್ಜಾಗಿದ್ದು, ಬೈಕ್ ಮೇಲಿದ್ದ ಇಬ್ಬರೂ ರಕ್ತಸ್ರಾವ ಆಗಿ ಸಾವು ಕಂಡಿದ್ದಾರೆ. ಬಸ್ ಮುಧೋಳದಿಂದ ಲೋಕಾಪುರ ಕಡೆ ಬರುತ್ತಿದ್ದರೆ, ಬೈಕ್‌ ಲೋಕಾಪುರದಿಂದ ಮುಧೋಳ ಮಾರ್ಗವಾಗಿ ಹೊರಟಿತ್ತು.

ಬೈಕ್‌ಗೆ ನಂಬರ್ ಪ್ಲೇಟ್ ಇಲ್ಲ. ಬೈಕ್‌ನಲ್ಲಿದ್ದವರು ಯಾರು ಎನ್ನುವುದು ಕೂಡಾ ಗೊತ್ತಿಲ್ಲ. ಹೀಗಾಗಿ ಸಾವನ್ನಪ್ಪಿದವರ ಬಗ್ಗೆ ಮಾಹಿತಿ ಕಲೆ ಹಾಕುವ ಪ್ರಯತ್ನ ನಡೆಯುತ್ತಿದೆ. ಲೋಕಾಪುರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ನವೀನ ಹಳೆಯದು